ಸೋಮವಾರ, ಜನವರಿ 21, 2013

ನೀರಬಿಟ್ಟು ನೆಲದ ಮೇಲೆ ದೋಣಿ ಸಾಗದು

ಚಿತ್ರ: ಹೊಂಬಿಸಿಲು
ಸಂಗೀತ: ರಾಜನ್ ನಾಗೇಂದ್ರ
ಸಾಹಿತ್ಯ:ಗೀತಪ್ರಿಯ
ನಿರ್ದೇಶನ:B S ಸೋಮಶೇಕರ್
ಗಾಯಕರು:ಎಸ್.ಪಿ.ಬಾಲ ಸುಬ್ರಮಣ್ಯಮ್


ಹೇಹೇಹೇ........ಓಹೋಹೋಹೋ........ಆಹಾ ಆಹಾಹಾಹಾ.........
ನೀರಬಿಟ್ಟು ನೆಲದ ಮೇಲೆ ದೋಣಿ ಸಾಗದು
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು
ನಿನ್ನಾ ಬಿಟ್ಟು ನನ್ನಾ ನನ್ನಾ ಬಿಟ್ಟು ನಿನ್ನಾ
ಜೀವನಾ ಸಾಗದು ಜೀವನಾ ಸಾಗದು
ನೀರಬಿಟ್ಟು ನೆಲದ ಮೇಲೆ ದೋಣಿ ಸಾಗದು

ಸೂರ್ಯ ಬರದೆ ಕಮಲವೆಂದು ಅರಳದು
ಚಂದ್ರನಿರದೆ ತಾರೆಯೆಂದು ನಲಿಯದು
ಸೂರ್ಯ ಬರದೆ ಕಮಲವೆಂದು ಅರಳದು
ಚಂದ್ರನಿರದೆ ತಾರೆಯೆಂದು ನಲಿಯದು
ಒಲವು ಮೂಡದಿರಲು ಮನವು ಅರಳದು
ಮನವು ಅರಳದಿರಲು ಗೆಲುವು ಕಾಣದು
ಮನವು ಅರಳದಿರಲು ಗೆಲುವು ಕಾಣದು

ನೀರಬಿಟ್ಟು ನೆಲದ ಮೇಲೆ ದೋಣಿ ಸಾಗದು
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು
ನಿನ್ನಾ ಬಿಟ್ಟು ನನ್ನಾ ನನ್ನಾ ಬಿಟ್ಟು ನಿನ್ನಾ
ಜೀವನಾ ಸಾಗದು ಜೀವನಾ ಸಾಗದು
ನೀರಬಿಟ್ಟು ನೆಲದ ಮೇಲೆ ದೋಣಿ ಸಾಗದು

ಲೋಕದಲ್ಲಿ ಗಂಡು ಹೆಣ್ಣಿಗಾಸರೆ ಆದರಿಲ್ಲಿ ನಾನು ನಿನ್ನಾ ಕೈಸೆರೆ
ಲೋಕದಲ್ಲಿ ಗಂಡು ಹೆಣ್ಣಿಗಾಸರೆ ಆದರಿಲ್ಲಿ ನಾನು ನಿನ್ನಾ ಕೈಸೆರೆ
ಕೂಡಿ ನಲಿವಾ ಆಸೆ ಮನದೀ ಕಾದಿರೆ
ಹಿತವು ಎಲ್ಲಿ ನಾವು ಬೇರೆ ಆದರೆ ,ಹಿತವು ಎಲ್ಲಿ ನಾವು ಬೇರೆ ಆದರೆ

ನೀರಬಿಟ್ಟು ನೆಲದ ಮೇಲೆ ದೋಣಿ ಸಾಗದು
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು
ನಿನ್ನಾ ಬಿಟ್ಟು ನನ್ನಾ ನನ್ನಾ ಬಿಟ್ಟು ನಿನ್ನಾ
ಜೀವನಾ ಸಾಗದು ಜೀವನಾ ಸಾಗದು
ಆಹಾ ...ಹಾ...ಹಾ....ಲ ಲ ಲಾ .......ಹೊಂ ..ಹೊಂ ...ಹೊಂ......

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ